TSK

TSK · ಇಬ್ರಿಯರಿಗೆ 11:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

¶ ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.

ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.

ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?

ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.

ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.

ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.