ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
TSK
TSK · ಇಬ್ರಿಯರಿಗೆ 12:3
مراجع Treasury of Scripture Knowledge في ಕನ್ನಡ IRV.
ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
¶ ‹“ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.›
ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.
ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;
¶ ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.
¶ ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
¶ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.
¶ ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.
ಫರಿಸಾಯರು ಆತನಿಗೆ “ನಿನ್ನ ವಿಷಯವಾಗಿ ನೀನೇ ಸಾಕ್ಷಿ ಹೇಳುತ್ತಿರುವೆ, ನಿನ್ನ ಸಾಕ್ಷಿಯು ನಿಜವಲ್ಲ” ಎಂದು ಹೇಳಲು
¶ ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?
ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
¶ ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,
¶ ‹“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.›
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
¶ ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
¶ ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”