¶ ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
TSK
TSK · ಇಬ್ರಿಯರಿಗೆ 12:5
مراجع Treasury of Scripture Knowledge في ಕನ್ನಡ IRV.
ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.
ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.
ಮನುಷ್ಯನು ದೇವರನ್ನು ಕುರಿತು, ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ,
ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, ನಿನ್ನ ವಾಕ್ಯವನ್ನು ಮರೆಯುವುದಿಲ್ಲ.
ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.
ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
‹ಆ ಐದು ರೊಟ್ಟಿಗಳನ್ನು›‹ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?›
ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು,
ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.
ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
¶ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.