TSK

TSK · ಇಬ್ರಿಯರಿಗೆ 13:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.

ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.

ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,

“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

¶ “ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.

ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.

ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.

ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

¶ ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.

ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.

¶ ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.

ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?

ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.

ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.

ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.

¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”