¶ ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
TSK
TSK · ಇಬ್ರಿಯರಿಗೆ 2:1
مراجع Treasury of Scripture Knowledge في ಕನ್ನಡ IRV.
ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.
ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.
ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.
ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.
ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.
‹ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?›
¶ ‹“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು”› ಎಂದು ಹೇಳಿದನು.
ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.
ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.