ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
TSK
TSK · ಇಬ್ರಿಯರಿಗೆ 3:10
مراجع Treasury of Scripture Knowledge في ಕನ್ನಡ IRV.
ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.
ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!
ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.
ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.
‹ಆ ತೀರ್ಪು ಏನೆಂದರೆ›‹ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.›
¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
¶ ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.