ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ
TSK
TSK · ಇಬ್ರಿಯರಿಗೆ 3:12
مراجع Treasury of Scripture Knowledge في ಕನ್ನಡ IRV.
ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.
¶ ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.
ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”
ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.
ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, ‹“ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.›
¶ ‹“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,›
‹ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು›‹ಎಚ್ಚರವಾಗಿರಿ,›‹ಜಾಗರೂಕರಾಗಿರಿ.›
ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.
ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ
ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ.
ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.