ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
TSK
TSK · ಇಬ್ರಿಯರಿಗೆ 3:14
مراجع Treasury of Scripture Knowledge في ಕನ್ನಡ IRV.
ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ.
ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
¶ ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,
ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
¶ ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,