ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
TSK
TSK · ಇಬ್ರಿಯರಿಗೆ 4:13
مراجع Treasury of Scripture Knowledge في ಕನ್ನಡ IRV.
ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.
ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.
ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ?
ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.
ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
ಯೇಸು ಆಕೆಗೆ ‹“ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ”› ಎಂದು ಹೇಳಿದನು.
ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.
ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
‹ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ›‹ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.›‹ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.›