ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.
TSK
TSK · ಇಬ್ರಿಯರಿಗೆ 5:14
مراجع Treasury of Scripture Knowledge في ಕನ್ನಡ IRV.
ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.
ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.
ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.
ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.
‹ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.›
¶ ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.
ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.
ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.