TSK

TSK · ಇಬ್ರಿಯರಿಗೆ 6:18

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.

¶ ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.

ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ

ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.

ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.

ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?

ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.

ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.

‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.›

ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.

ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.

ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;

ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.

ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.

ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,

ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.

ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.

ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”

¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.