ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
TSK
TSK · ಇಬ್ರಿಯರಿಗೆ 8:10
مراجع Treasury of Scripture Knowledge في ಕನ್ನಡ IRV.
ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.
¶ ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.
ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
¶ ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.
ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.
¶ “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.
ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.
ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”
‹‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ”› ಎಂದು ಹೇಳಿದನು.
ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.