¶ ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
TSK
TSK · ಇಬ್ರಿಯರಿಗೆ 8:9
مراجع Treasury of Scripture Knowledge في ಕನ್ನಡ IRV.
¶ ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
¶ ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.
ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.
ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,
¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.
ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.
ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.
ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.
“ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಲಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು.
ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.
ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
¶ ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
¶ ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.