ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.
TSK
TSK · ಇಬ್ರಿಯರಿಗೆ 9:24
مراجع Treasury of Scripture Knowledge في ಕನ್ನಡ IRV.
ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.
‹ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?›
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.
ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
¶ ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,
¶ ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.