ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.
TSK
TSK · ಇಬ್ರಿಯರಿಗೆ 9:7
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.
ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.
ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.
ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು,