ಆದಿಕಾಂಡ 49:10
TSK
ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
مراجع Treasury of Scripture Knowledge في ಕನ್ನಡ IRV.
ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.
ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.
ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.
ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.