ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”
TSK
TSK · ಹೋಶೇ 2:13
مراجع Treasury of Scripture Knowledge في ಕನ್ನಡ IRV.
¶ ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.
¶ ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.
¶ ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.
ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.
ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.
ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,
“ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.
ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,
ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
¶ ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.
ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು.
ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.
¶ “ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.
ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.
ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?
ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.
ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.
ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.