ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.
TSK
TSK · ಹೋಶೇ 2:14
مراجع Treasury of Scripture Knowledge في ಕನ್ನಡ IRV.
ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.
ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.
¶ ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.
ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.
¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.
¶ ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
‹“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.›
ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.