ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು
TSK
TSK · ಹೋಶೇ 2:3
مراجع Treasury of Scripture Knowledge في ಕನ್ನಡ IRV.
ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.
ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.
ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು.
ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.
ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.
ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ.
ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.
ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.