TSK

TSK · ಹೋಶೇ 2:8

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು.

¶ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;

ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.

ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.

ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.

ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.

ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.

ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.

ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.

ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.

¶ ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,›

¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.