¶ ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
TSK
TSK · ಹೋಶೇ 3:4
مراجع Treasury of Scripture Knowledge في ಕನ್ನಡ IRV.
ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.
ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.
¶ ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.
¶ ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು.
ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,
ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.
ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
¶ ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.
ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.
“ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”
ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.
ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”
ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.
ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›
ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.