ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.
TSK
TSK · ಹೋಶೇ 3:5
مراجع Treasury of Scripture Knowledge في ಕನ್ನಡ IRV.
ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”
ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ’ ಎಂದು ಕೂಗುವರು” ಎಂದು ಹೇಳುವನು.
ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.
ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.
ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.
ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.
ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.
ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?