ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’
TSK
TSK · ಹೋಶೇ 4:12
مراجع Treasury of Scripture Knowledge في ಕನ್ನಡ IRV.
ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು
ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.
ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.
¶ ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
¶ “ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.
ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.
ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.
‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.