ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
TSK
TSK · ಹೋಶೇ 4:14
مراجع Treasury of Scripture Knowledge في ಕನ್ನಡ IRV.
ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.
ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.
ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.
ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.
ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.
ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.