ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
TSK
TSK · ಹೋಶೇ 4:7
مراجع Treasury of Scripture Knowledge في ಕನ್ನಡ IRV.
ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.
ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.
ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ.
ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.
ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.