ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
TSK
TSK · ಹೋಶೇ 4:8
مراجع Treasury of Scripture Knowledge في ಕನ್ನಡ IRV.
ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’
ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
¶ “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
¶ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.