ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ
TSK
TSK · ಹೋಶೇ 5:1
مراجع Treasury of Scripture Knowledge في ಕನ್ನಡ IRV.
ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.
ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;
ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.
ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ.
ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.
ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.
¶ ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,
¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?
ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.
¶ “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.