TSK

TSK · ಹೋಶೇ 6:3

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.

ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ, ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.

ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.

ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,

ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.

ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”

ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.

ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.

ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.

ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.›

‹ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.›

ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.

ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.

¶ ‹“ಯೇಸುವೆಂಬ ನಾನು›‹ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ›‹ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು›‹ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ›‹ಅವನ ಸಂತತಿಯೂ›‹ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”›