ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
TSK
TSK · ಹೋಶೇ 6:5
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.
¶ ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.
ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;
ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ!
ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.
ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,
ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.”
ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.
ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
‹ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ›‹ನಾನು ಬೇಗನೆ ನಿನ್ನ ಬಳಿಗೆ ಬಂದು›‹ನನ್ನ ಬಾಯಿಂದ ಹೊರಬರುವ ಕತ್ತಿಯಿಂದ›‹ಅವರ ಮೇಲೆ ಯುದ್ಧ ಮಾಡುವೆನು.›
ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.