ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.
TSK
TSK · ಹೋಶೇ 8:1
مراجع Treasury of Scripture Knowledge في ಕನ್ನಡ IRV.
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
¶ ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.
¶ “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
¶ ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.
ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.
ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?
¶ ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.
ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.
ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!
ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.