ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.
TSK
TSK · ಹೋಶೇ 8:12
مراجع Treasury of Scripture Knowledge في ಕನ್ನಡ IRV.
ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.
ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.