TSK

TSK · ಹೋಶೇ 8:7

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,

¶ ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.

¶ ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.

ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.

ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.

ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.

ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.

ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸವಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.

ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.