ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.
TSK
TSK · ಹೋಶೇ 9:2
مراجع Treasury of Scripture Knowledge في ಕನ್ನಡ IRV.
ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.
ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.
ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.
ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”