ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
TSK
TSK · ಯೆಶಾಯ 1:18
مراجع Treasury of Scripture Knowledge في ಕನ್ನಡ IRV.
ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.
ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.
ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.
ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,
ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.
ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.