TSK

TSK · ಯೆಶಾಯ 1:28

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.

ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.

ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.

ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?

ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ.

ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.

ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.

ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.

ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.

ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”

ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.

“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”

‹ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,›

ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.