TSK

TSK · ಯೆಶಾಯ 1:29

مراجع Treasury of Scripture Knowledge في ಕನ್ನಡ IRV.

العودة إلى المقطع

ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.

ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.

ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.

¶ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.

ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.

ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?

ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.

ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?