ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.
TSK
TSK · ಯೆಶಾಯ 10:12
مراجع Treasury of Scripture Knowledge في ಕನ್ನಡ IRV.
ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.
ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.
ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.
ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!
ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.
ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.
ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.
¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.
¶ ‹“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.›
¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?