ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
TSK
TSK · ಯೆಶಾಯ 10:16
مراجع Treasury of Scripture Knowledge في ಕನ್ನಡ IRV.
ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.
ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.
ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
“ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.
ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.
“ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.