TSK

TSK · ಯೆಶಾಯ 10:21

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,

ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.

ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.

“ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.

ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”

ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.

ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.

ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.