¶ ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು.
TSK
TSK · ಯೆಶಾಯ 11:3
مراجع Treasury of Scripture Knowledge في ಕನ್ನಡ IRV.
ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.
ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.
ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.
ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.
ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.
‹ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.›
ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ.
ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.