ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.
TSK
TSK · ಯೆಶಾಯ 11:6
مراجع Treasury of Scripture Knowledge في ಕನ್ನಡ IRV.
ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.