TSK

TSK · ಯೆಶಾಯ 11:9

مراجع Treasury of Scripture Knowledge في ಕನ್ನಡ IRV.

العودة إلى المقطع

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.

ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.

ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.

ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.

ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.

ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

¶ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.

ಅವನು ಮತ್ತೆ ಸಾವಿರ ಮೊಳ ಅಳೆದನು. ಅದು ನನ್ನಿಂದ ದಾಟಲಾಗದ ನದಿಯಾಗಿತ್ತು; ನೀರು ಆಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು, ದಾಟಲಾಗದ ನದಿಯಾಗಿತ್ತು.

ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’

¶ ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.

ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.

¶ ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.

¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.

ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.