TSK

TSK · ಯೆಶಾಯ 12:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.

ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.

ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.

ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.

ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.

ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.

ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.

ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!

ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.

ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.

“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.

¶ ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.

ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.

ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.

ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.

ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,