ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
TSK
TSK · ಯೆಶಾಯ 13:4
مراجع Treasury of Scripture Knowledge في ಕನ್ನಡ IRV.
ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,
“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.
“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.
ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.
ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.
ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.
ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.