ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
TSK
TSK · ಯೆಶಾಯ 13:7
مراجع Treasury of Scripture Knowledge في ಕನ್ನಡ IRV.
ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.
ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.
‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”
¶ ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
¶ ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?