ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.
TSK
TSK · ಯೆಶಾಯ 14:24
مراجع Treasury of Scripture Knowledge في ಕನ್ನಡ IRV.
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.
ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.
ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.
ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.
¶ ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.