“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?
TSK
TSK · ಯೆಶಾಯ 14:27
مراجع Treasury of Scripture Knowledge في ಕನ್ನಡ IRV.
ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?
ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?
ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.
ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.
¶ ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;
¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?