TSK

TSK · ಯೆಶಾಯ 17:11

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.

ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ, ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.

ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.

‹ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;›

ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.