TSK

TSK · ಯೆಶಾಯ 17:4

مراجع Treasury of Scripture Knowledge في ಕನ್ನಡ IRV.

العودة إلى المقطع

ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.

ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.

ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.

ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.

¶ “‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.

ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.