TSK

TSK · ಯೆಶಾಯ 19:11

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.

ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.

ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.

ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.

ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.

ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.

ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ.

ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.

ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.

ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?

ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,

ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.